Kannada NewsKarnataka NewsLatest

ಇ-ಪಾಸ್ ಇಲ್ಲದೇ ಅಕ್ರಮ ಪ್ರವೇಶಿಸಿದರೆ ಕ್ರಿಮಿನಲ್ ಮೊಕದ್ದಮೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಸೂಕ್ತ ಅನುಮತಿಪತ್ರ(ಇ-ಪಾಸ್‌) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನುಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನುಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.

ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು.
ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರು ಒಂದು ವೇಳೆ ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button