Latest

ಕೊರೋನಾ: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ  1458 ಜನರಿಗೆ ಸೋಂಕು ತಗುಲಿದಂತಾಗಿದೆ.

ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನಗದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟೂ 40 ಜನರು ಕೊರೆನಾದಿಂದ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಇಂದು 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದು ಆರೋಗ್ಯ ಇಲಾಖೆ ಹೊಸ ರೀತಿಯಲ್ಲಿ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದ್ದು, ಕೊರೆನಾ ಸೋಂಕು ತಗುಲಿದ್ದು ಹೇಗೆ ಎನ್ನುವುದನ್ನು ಹೇಳಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button