Latest

ಜಮ್ಮು-ಕಾಶ್ಮೀರದಲ್ಲಿ 8 ಭಯೋತ್ಪಾದಕರನ್ನು ಸದೆಬಡಿದ ಭದ್ರತಾ ಪಡೆ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರ ಕಣಿವೆಯಲ್ಲಿ ಕಳೆದ 24 ಗಂಟೆಗಳಲ್ಲಿ 8 ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಈ ಪೈಕಿ ಪಾಂಪೋರ್‌ನ ಜಾಮಿಯಾ ಮಸೀದಿಯಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನೂ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಮಸೀದಿಯಲ್ಲಿ ಅಡಗಿದ್ದ ಉಗ್ರರ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಧಾರ್ಮಿಕ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

Home add -Advt

ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕರನ್ನು ಮೊದಲು ಮಸೀದಿ ಬಿಟ್ಟು ಹೊರಬರುವ ಅನಿವಾರ್ಯತೆ ಸೃಷ್ಟಿಸಿದ ಭದ್ರತಾ ಪಡೆಗಳು, ನಂತರ ಇಬ್ಬರನ್ನೂ ಹೊಡೆದುರುಳಿಸುವಲ್ಲಿ ಯಶಸ್ವಿಯಾದವು ಎಂದು ವಿವರಿಸಿದ್ದಾರೆ.

ಜಮ್ಮು-ಕಾಶ್ಮೀರದ ಅವಂತಿಪೋರಾ ಪ್ರದೇಶದ ಮೀನ್ ಗ್ರಾಮದಲ್ಲಿ ಗುರುವಾರ ಓರ್ವ ಭಯೋತ್ಪಾದಕನನ್ನು ಹಯೆಗೈಯ್ಯಲಾಗಿದೆ. ಅಲ್ಲದೇ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಗುರುತಿಸಲಾಗಿದೆ.

Related Articles

Back to top button