
ದಾವಣಗೆರೆಯಲ್ಲಿ ಕೆ.ಎಚ್.ಮುನಿಯಪ್ಪ ಜೊತೆ ಪತ್ರಿಕಾಗೋಷ್ಠಿ
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ – ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಮಂಡಲದ ಅಧಿವೇಶನವನ್ನು ಕರೆಯಬೇಕು ಎಂದು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಕೆ ಎಚ್ ಮುನಿಯಪ್ಪ ಮತ್ತು ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.



ಕೊರೋನಾ ಸಂದರ್ಭದಲ್ಲಿ ಬಿಜೆಪಿ ಸ್ವಾರ್ಥ ರಾಜಕೀಯ ಮಾಡುತ್ತಿದೆ. ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆ ನಡೆಯುತ್ತಿದೆ. ಅಲ್ಲಿನ ಸರಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ಇದೊಂದಗು ನಾಚಕೆಗೇಡಿನ ವಿದ್ಯಮಾನ ಎಂದೂ ಲಕ್ಷ್ಮಿ ಹೆಬ್ಬಾಳಕರ್ ಟೀಕಿಸಿದರು.
ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಮಾಜಿ ಎಂ ಎಲ್ ಸಿ ಅಬ್ದುಲ್ ಜಬ್ಬಾರ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಬಿ ಮಂಜಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಮಾಜಿ ಶಾಸಕಡಿ ಜಿ ಶಾಂತಾಗೌಡರು, ಮಾಜಿ ಶಾಸಕ ರಾಜೇಶ, ಶಾಸಕಎಸ್ ರಾಮಪ್ಪ, ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಅನಿತಾ ಮೊದಲಾದವರು ಉಪಸ್ಥಿತರಿದ್ದರು.