Latest

ರಾಗಿಣಿ ಆಪ್ತ ರವಿಶಂಕರ ಸೇವೆಯಿಂದ ಅಮಾನತು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಬಿ.ಕೆ.ರವಿಶಂಕರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಕುರಿತು ಸಾರಿಗೆ ಇಲಾಖೆಯ ಆಯುಕ್ತ ಎನ್. ಶಿವಕುಮಾರ ಆದೇಶ ಹೊರಡಿಸಿದ್ದಾರೆ. ನೌಕರ ಎಸಗಿರುವ ದುರ್ನಡತೆಗಾಗಿ ಕರ್ನಾಟಕ ನಾಗರಿಕ ಸೇವೆ ಕಾಯ್ದೆಯನ್ವಯ ಇಲಾಖೆ ತನಿಖೆ ಬಾಕಿ ಇಟ್ಟು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ನಕರ ಇಲಾಖೆಯ ಘನತೆಗೆ ದಕ್ಕೆ ತರುವಂತಹ ಕೆಲಸದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ತಿಳಿಸಲಾಗಿದೆ.

Home add -Advt

Related Articles

Back to top button