Kannada NewsKarnataka NewsLatest

ಸವದತ್ತಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಆನಂದ ಮಾಮನಿ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಗಳ ಆದೇಶದನ್ವಯ ಈ ನೇಮಕ ಮಾಡಲಾಗಿದೆ. 23.3. 2018ರಲ್ಲಿ 16 ಸದಸ್ಯರನ್ನೊಳಗೊಂಡಿರುವ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಲಾಗಿದ್ದು, ಅದರ ಅಧಿಕಾರಾವಧಿ 3 ವರ್ಷ. ಈಗ ಹೊಸದಾಗಿ ವ್ಯವಸ್ಥಾಪನಾ ಸಮಿತಿ ಆಗಬೇಕಿದೆ.

ವ್ಯವಸ್ಥಾಪನಾ ಸಮಿತಿ ಆಗುವವರೆಗೂ ಆನಂದ ಮಾಮನಿ ಅವರನ್ನು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button