Kannada NewsKarnataka NewsLatest

ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಆಕ್ಷೇಪವಿಲ್ಲ – ರಮೇಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ.
ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ
ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಜಾರಕಿಹೊಳಿಯವರು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button