ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೇರಳದ ಪ್ರಸಿದ್ಧ ಅನಂತಪದ್ಮನಾಭಸ್ವಾಮಿ ದೇವಾಲಯದ ಪ್ರಧಾನ ಅರ್ಚಕರು ಸೇರಿ 12 ಅರ್ಚಕರಿಗೆ ಕೊರೊನಾ ಸೋಂಕು ದೃಢಪಟ್ಟದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಸ್ಥಾನ ಪ್ರವೇಶವನ್ನು ಭಕ್ತರಿಗೆ ನಿರ್ಬಂಧಿಸಲಾಗಿದೆ.
ಅನಂತ ಪದ್ಮನಾಭಸ್ವಾಮಿ ದೇವಾಲಯದ ಇಬ್ಬರು ಪ್ರಧಾನ ಅರ್ಚಕರು ಸೇರಿದಂತೆ 12 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ದೇವಾಲಯವನ್ನು ಮುಚ್ಚುವ ನಿರ್ಧಾರ ಕೈಗೊಳ್ಳಲಾಗಿದ್ದು, ದೈನಂದಿನ ಪೂಜೆ ತಂತ್ರಿಗಳಿಂದ ನಡೆಯಲಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ಲಾಕ್ ಡೌನ್ ಬಳಿಕ ಆಗಸ್ಟ್ 27ರಿಂದ ದೇವಾಲಯವನ್ನು ತೆರೆಯಲಾಗಿದ್ದು, ಆದರೀಗ ಅರ್ಚಕರು ಸೇರಿದಂತೆ ಹಲವು ಸಿಬ್ಬಂದಿಗಳಿಗೆ ಸೋಂಕು ಹರಡಿರುವ ಹಿನ್ನೆಲೆಯಲಿ ಕೆಲದಿನಗಳ ವರೆಗೆ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ