Latest

ಮನನೊಂದ ಮಹಿಳೆ ಮಾಡಿದ ಘೋರ ಕೃತ್ಯ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಪತಿ ಹಾಗೂ ಅತ್ತೆ-ಮಾವನನ್ನು ರಾಡ್ ನಿಂದ ಹೊಡೆದು ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿಯಲ್ಲಿ ವಾರದ ಹಿಂದೆ ನಡೆದಿದ್ದ ಘಟನೆ ಇದೀಗ ಬೆಳಕಿಗೆ ಬಂದಿದೆ. ಕುಟುಂಬ ಕಲಹದಿಂದ ನೊಂದ ಮಹಿಳೆ, ರಾತ್ರಿ ನಿದ್ದೆಗೆ ಜಾರಿದ್ದ ಪತಿ ಹಾಗೂ ಅತ್ತೆ-ಮಾವನ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದಿದ್ದಾಳೆ.

ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನು ಪ್ರಕರಣ ಸಂಬಂಧ ಆರೋಪಿ ನಾಗಮಣಿ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

Related Articles

Back to top button