
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಂತ ತಂದೆಯೇ ಮೂರು ಮಕ್ಕಳನ್ನು ನೇಣುಬಿಗಿದು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಜನಕರಾಜ್ ಬಿಸ್ತಾ (32) ಎಂಬಾತ ತನ್ನ ಮೂವರು ಮಕ್ಕಳಾದ ಸರಸ್ವತಿ (14), ಹೇಮತಿ (9) ಹಾಗೂ 3 ವರ್ಷದ ಮಗ ರಾಜಕುಮಾರ್ ನನ್ನು ನೇಣಿಗೆ ಕೊರಳೊಡ್ಡಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜನಕರಾಜ್ ಬಿಸ್ತಾ ರಮಣಶ್ರೀ ಎನ್ ಕ್ಲೇವ್ ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮೈಕೋ ಲೇಔಟ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.