Latest

ಆ ಯಮ್ಮ ಏನೂ ಮಾಡಲ್ಲ, ಯಾವುದೇ ಕೆಲಸ ಇದ್ದರೂ ನನಗೆ ಹೇಳಿ ನಾನು ಮಾಡಿಕೊಡುತ್ತೇನೆ ಎಂದ ಸಂಸದ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸಂಸದೆ ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ, ಮಂಡ್ಯದ ಕೆಲಸ ಏನಿದ್ದರೂ ನನಗೆ ಹೇಳಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಯಾವುದೇ ಕೆಲಸ ಮಾಡಲು ಬಿಡುವುದಿಲ್ಲ ಎಂದು ಅಧಿಕಾರಿಯೊಬ್ಬರು ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಹೆಚ್.ಡಿ ದೇವೇಗೌಡರ ಕುಟುಂಬವನು ಸೋಲಿಸಬೇಕು ಎಂದು ಮಂಡ್ಯದಲ್ಲಿ ಸುಮಲತಾ ಅವರನ್ನು ಗೆಲ್ಲಿಸಿದರು. ಆ ಯಮ್ಮ ಏನೂ ಕೆಲಸ ಮಾಡಲ್ಲ. ಅಲ್ಲದೇ ಮಂಡ್ಯದ ಏನೇ ಕೆಲಸವಾಗಬೇಕೆಂದರೂ ನನಗೆ ಹೇಳಿ ಎಂದಿದ್ದಾರೆ.

ಪ್ರತಾಪ್ ಸಿಂಹ ಹೇಳಿಕೆಗೆ ಇದೀಗ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button