Latest

ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆಯೇ ಹರಿದ ಬಸ್

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಬಸ್ ಗೆ ಕಾಯುತ್ತಿದ್ದವರ ಮೇಲೆ ಬಸ್ ಹರಿದ ಪರಿಣಾಮ ಐವರು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಶಾಮ್ಲಿ ಜಿಲ್ಲೆಯ ಥಾನ ಬನ್ ವಾನ್ ನಗರದಲ್ಲಿ ಈ ದುರಂತ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಹರಿದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button