Kannada NewsLatest

ಸಾರಿಗೆ ಸಿಬ್ಬಂದಿಗಳಿಂದಲೇ ಬಸ್ ಮೇಲೆ ಕಲ್ಲು ತೂರಾಟ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಷ್ಕರ ಹಿಂಪಡೆಯುವಂತೆ ಸರ್ಕಾರ ಮಾಡಿರುವ ಮನವಿಗೂ ಸಾರಿಗೆ ಸಿಬ್ಬಂದಿ ಜಗ್ಗುತ್ತಿಲ್ಲ.

ಈ ನಡುವೆ ಕೆಲ ಜಿಲ್ಲೆಗಳಲ್ಲಿ ವಿರಳವಾಗಿ ಬಸ್ ಸಂಚಾರ ಆರಂಭವಾಗಿದೆ. ಬೆಳಗಾವಿಯಲ್ಲಿ ಪ್ರತಿಭಟನಾ ನಿರತ ಸಾರಿಗೆ ನೌಕರರ ಕಣ್ತಪ್ಪಿಸಿ ಬಸ್ ಓಡಾಟ ನಡೆಸಿದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿಗಳೇ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಹೊರವಲಯದ ಎನ್ ಹೆಚ್ 4ನಲ್ಲಿ ಸಾರಿಗೆ ಸಿಬ್ಬಂದಿಗಳೇ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button