Latest

ಕಾರು ಕಲಿಯಲು ಮುಂದಾದ ಅಪ್ರಾಪ್ತ ಬಾಲಕ; ಒಂದೇ ಕುಟುಂಬದ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಪ್ರಾಪ್ತ ಬಾಲಕನೊಬ್ಬ ಕಾರು ಕಲಿಯುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು-ಬೆಂಗಳೂರು ರಸ್ತೆಯಲ್ಲಿ ನಡೆದಿದೆ.

9ನೇ ತರಗತಿಯ ವಿದ್ಯಾರ್ಥಿ ಕಾರು ಕಲಿಯಲೆಂದು ಮುಖ್ಯರಸ್ತೆಯಲ್ಲಿ ಕಾರು ಚಲಾಯಿಸಿದ್ದಾನೆ. ಆದರೆ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಗುದ್ದಿ, ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ರಮೇಶ್(41), ಪತ್ನಿ ಉಷಾ (36) ಹಾಗೂ ಪುತ್ರ ಮನೀಷ್ (5) ಎಂದು ಗುರುತಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button