
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರ ತಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡಿದರೆ ಮುಷ್ಕರ ಕೈಬಿಡುವುದಾಗಿ ಸಾರಿಗೆ ನೌಕರರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಖಿತ ರೂಪದಲ್ಲಿ ಆದೇಶ ಪ್ರತಿಯನ್ನು ನೀಡುತ್ತಿದ್ದೆವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸವದಿ, ಸಾರಿಗೆ ನೌಕರರ 10 ಬೇಡಿಕೆಗಳ ಪೈಕಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದೇವೆ. ಈ ಬಗ್ಗೆ ಲಿಖಿತ ರೂಪದಲ್ಲೀ ಆದೇಶ ಪ್ರತಿ ನೀಡಿದ್ದೇವೆ. ಸಾರಿಗೆ ನೌಕರರು ಹಾಗೂ ನಮ್ಮ ನಡುವೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಹೇಳಿದರು.
ನಿನ್ನೆಯೇ ಭರವಸೆ ಈಡೇರಿಸುವ ಬಗ್ಗೆ ಲಿಖಿತ ರೂಪದಲ್ಲಿ ಆದೇಶ ಪ್ರತಿ ಸಿದ್ಧಪಡೆಸಿದ್ದೆವು. ಹಾಗಾಗಿ ಸರ್ಕಾರದ ಪ್ರತಿನಿಧಿಯಾಗಿ ನಂದೀಶ್ ರೆಡ್ಡಿ ಮುಖಾಂತರ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರಿಗೆ ಲಿಖಿತ ಪ್ರತಿ ತಲುಪಿಸುವುದಾಗಿ ತಿಳಿಸಿದರು.
ಸಾರಿಗೆ ನೌಕರರು-ಸರ್ಕಾರದ ಸಂಧಾನ ಯಶಸ್ವಿ; ಮುಷ್ಕರ ಅಂತ್ಯ
ಸಾರಿಗೆ ನೌಕರರ ಹೋರಾಟದ ಗೌರವಾಧ್ಯಕ್ಷ ಕೋಡಿಹಳ್ಳಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ