Kannada NewsLatest

ಯಮಕನಮರಡಿಯಲ್ಲಿ ಕೈ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿಯಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ ಹಾಗೂ ಭರಮ ಧೂಪದಾಳ್ ಮೇಲೆ ಅಪರಿಚಿತರು ಮಾಸ್ಕ್ ಧರಿಸಿಬಂದು 7 ಅಡಿ ದೂರದಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಚಟುವಟಿಕೆ ಗರಿಗೆದರಿದ ಬೆನ್ನಲ್ಲೇ ಹಳೇ ವೈಷಮ್ಯದಿಂದ ದಾಳಿ ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

Home add -Advt

ಭರಮಾ ಧೂಪದಾಳ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button