Latest
ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಶೀಘ್ರ ನಿರ್ಧಾರ: ಮಾರ್ಚ್ ನಲ್ಲಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರ್ಚ್ 2021ರಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಂವಾದದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಹೊರೆಯಾಗದಂತೆ ಪಠ್ಯಕ್ರಮಗಳನ್ನು ಅಂತಿಮಗೊಳಿಸಲಾಗುತ್ತಿದ್ದು, ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದರು.
ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮತ್ತೆ ಕೊರೋನಾ ಗಡಿ ಬಿಡಿ: ಹಲವು ಕಠಿಣ ಕ್ರಮ ಜಾರಿ




