ಪ್ರಗತಿವಾಹಿನಿ ಸುದ್ದಿ, ಶಿರಸಿ:
ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆಗೆ ಬೆದರಿಕೆ ಕರೆಯೊಂದು ಬಂದಿದ್ದು ಈ ಕುರಿತು ಶಿರಸಿಯ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಭಾನುವಾರ ಅವರ ಮನೆಯ ದೂರವಾಣಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂದರ್ಭದಲ್ಲಿ ಸಚಿವರು ಮನೆಯಲ್ಲಿರಲಿಲ್ಲ. ಅನಂತಕುಮಾರ ಹೆಗಡೆಯವರ ಪತ್ನಿ ಕರೆ ಸ್ವೀಕರಿಸಿದ್ದಾರೆ. ಬೇರೆ ಧರ್ಮದ ವಿಷಯ ಮಾತನಾಡುವುದನ್ನು ನಿಲ್ಲಿಸಿ, ನಿಮ್ಮ ಕೆಲಸ ಮಾಡಿಕೊಂಡು ಹೋಗಿ. ಇಲ್ಲವಾದಲ್ಲಿ ಸುಮ್ಮನಿರಲ್ಲ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೂ ಕೂಡ ಅವರಿಗೆ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ಸಚಿವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.