Latest

ಹೃದಯಾಘಾತ; ಮತ ಎಣಿಕೆ ಕೇಂದ್ರದಲ್ಲೇ ಚುನಾವಣಾಧಿಕಾರಿ ಸಾವು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಚುನಾವಣಾಧಿಕಾರಿಯೊಬ್ಬರು ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಬೋರೇಗೌಡ (52) ಎಂದು ಗುರುತಿಸಲಾಗಿದೆ. ಬೋರೇಗೌಡ ಲೋಕೋಪಯೋಗಿ ಇಲಾಖೆ ಅಭಿಯಂತರರಾಗಿದ್ದು, ಪಿರಿಯಾಪಟ್ಟಣ ತಾಲೂಕಿನ ಎನ್.ಶೆಟ್ಟಿಹಳ್ಳಿ ಗ್ರಾಮ ಪಂಚಾಯತ್ ಚುನಾವಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದರು.

ಪುಷ್ಪ ವಿದ್ಯಾ ಸಂಸ್ಥೆಯ ಆವರಣದಲ್ಲಿನ ಮತ ಎಣಿಕೆ ಕೇಂದ್ರಕ್ಕೆ ಕರ್ತ್ಯವ್ಯಕ್ಕೆ ಹಾಜರಾಗಿದ್ದ ಬೋರೇಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೂ ಮಾರ್ಗಮಧ್ಯೆಯೇ ಬೋರೇಗೌಡ ಮೃತಪಟ್ಟಿದ್ದಾರೆ.

Home add -Advt

Related Articles

Back to top button