Latest

ದೇವಸ್ಥಾನದ ಹುಂಡಿಯಲ್ಲಿ ನಕಲಿ ನೋಟು; ಪ್ರಚೋದನಕಾರಿ ಬರಹ

ಅಪರಾಧಿಗಳನ್ನು ಕೂಡಲೇ ಬಂಧಿಸಿ – ಹಿಂದೂ ಜನಜಾಗೃತಿ ಸಮಿತಿ

ಪ್ರಗತಿವಾಹಿನಿ ಸುದ್ದಿ, ಮಂಗಳೂರು – ಮಂಗಳೂರಿನ ಬೊಬ್ಬು ಸ್ವಾಮಿ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಪ್ರವೇಶಿಸಿ ದೇವರ ಹುಂಡಿಯಲ್ಲಿ “ಪ್ರಭು ಏಸು ಕ್ರಿಸ್ತನು ಮಾತ್ರ ಆರಾಧನೆ ಹೊಂದಲು ಸೂಕ್ತ ವ್ಯಕ್ತಿ”, “ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟುಗಳನ್ನು ಹಾಕಿರುವಂತಹ ಆಘಾತಕಾರಿ ಘಟನೆ ನಡೆದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಹಿಂದೂಗಳ ಧಾರ್ಮಿಕ ಭಾವನೆಗೆ ನೋಯಿಸುವ ದುರುದ್ದೇಶದಿಂದಲೇ ಈ ರೀತಿ ದುಷ್ಕೃತ್ಯ ಮಾಡಲಾಗಿದೆ, ಯಾವುದೇ ಚರ್ಚ್ ಅಥವಾ ಮಸೀದಿಯಲ್ಲಿ ಇಂತಹ ಘಟನೆಗಳು ನಡೆದಿದ್ದಲ್ಲಿ ಸರ್ಕಾರವು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಮತ್ತು ಮಾಧ್ಯಮಗಳು ಧ್ವನಿ ಎತ್ತುತ್ತವೆ. ಈ ಸಂದರ್ಭದಲ್ಲಿಯೂ ಸರ್ಕಾರವು ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು ಹಿಂದೂಗಳ ಧಾರ್ಮಿಕ ಭಾವನೆಯ ಗೌರವವನ್ನು ಕಾಪಾಡಬೇಕು ಎಂಬುದು ಹಿಂದೂಗಳ ಆಶಯವಾಗಿದೆ ಎಂದು ಸಮಿತಿ ವಕ್ತಾರ ಮೋಹನ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಘಟನೆಯ ಹಿಂದೆ ಎರಡು ಪಂಥಗಳ ನಡುವೆ ಶತೃತ್ವ ನಿರ್ಮಾಣ ಮಾಡುವ ಷಡ್ಯಂತ್ರವಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಈ ರೀತಿಯಲ್ಲಿ ಹಿಂದೂ ದೇವತೆಗಳ ಅಪಮಾನ ಮಾಡಿ, ಹಿಂದೂ ಧಾರ್ಮಿಕ ಭಾವನೆಗೆ ನೋವುಂಟು ಮಾಡುವುದು ಭಾರತೀಯ ದಂಡ ಸಂಹಿತೆ 295A ಪ್ರಕಾರ ಅಪರಾಧವಾಗಿದೆ. ಕೂಡಲೇ ಸಿಸಿ ಟಿವಿ ಕ್ಯಾಮೆರಾ ಇತ್ಯಾದಿ ಮಾಧ್ಯಮಗಳಿಂದ ಅಪರಾಧಿಗಳನ್ನು ಹುಡುಕಿ, ಕಠಿಣ ಶಿಕ್ಷೆ ನೀಡಬೇಕು, ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು ಮತ್ತು ಸರಕಾರವು ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಜರುಗಿಸಬೇಕು ಎಂದು ಸಮಿತಿಯು ಆಗ್ರಹಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button