
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡುವ ದಿಸೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ಕ್ಷೇತ್ರದಲ್ಲಿ ಇರುವ ಸಮಸ್ಯೆಗಳನ್ನೆಲ್ಲ ಒಂದೊಂದಾಗಿ ಪರಿಹರಿಸಲಾಗುತ್ತಿದೆ. ಇಡೀ ಕ್ಷೇತ್ರವನ್ನು ಆದರ್ಶವನ್ನಾಗಿ ಮಾಡುವ ನನ್ನ ಸಂಕಲ್ಪದಲ್ಲಿ ಸಾಕಷ್ಟು ಯಶಸ್ಸು ಸಿಗುತ್ತಿದೆ. ಎಲ್ಲರ ಪ್ರೋತ್ಸಾಹ ದೊರೆಯುತ್ತಿದೆ. ಇದು ಹೀಗೆಯೇ ಮುಂದುವರಿಯಲಿ ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಗುಲಾಬಿ ಅ ಕೋಲಕಾರ, ಅಪ್ಸರ್ ಜಮಾದಾರ, ಅಬೇದಾ ಸನದಿ, ಇಸ್ಮಾಯಿಲ್, ಹೊನಗೌಡ, ರಸೂಲ್, ಸಿಮಣ್ಣ, ಶಿವಪ್ಪ ಪೂಜೇರಿ, ಸುರೇಶ ವರ್ಧಮಾನ, ಪ್ರೇಮ ಕೋಲಕಾರ ಹಾಗೂ ಮುಂತಾದವರು ಉಪಸ್ಥಿತರಿದ್ದರು.