Latest

ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಕಾರು ಅಪಘಾತ: ಪತ್ನಿ ಆಪ್ತಸಹಾಯಕ ದುರ್ಮರಣ

ಪ್ರಗತಿವಾಹಿನಿ ಸುದ್ದಿ, ಅಂಕೋಲಾ – ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ಕಾರು ಅಂಕೋಲಾ ಬಳಿ ಪಲ್ಟಿಯಾಗಿದ್ದು, ಅವರ ಪತ್ನಿ ಹಾಗೂ ಆಪ್ತಸಹಾಯಕ ಮೃತರಾಗಿದ್ದಾರೆ.

ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಅವಘಡ ಸಂಭವಿದೆ. ಗೋವಾದವರಾಗಿರುವ ಶ್ರೀಪಾದ ನಾಯಕ ಅವರು ಪತ್ನಿಯೊಂದಿಗೆ ತೆರಳುತ್ತಿರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಗಂಭೀರ ಗಾಯಗೊಂಡಿದ್ದ ಪತ್ನಿ ವಿಜಯಾ ಹಾಗೂ ಆಪ್ತ ಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಶ್ರೀಪಾದ ನಾಯಕ ಸಹ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Home add -Advt

 

Related Articles

Back to top button