ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮದ್ದೂರಿನ ಗುಡಿಗೆರೆಯ ವೀರಯೋಧ ದಿವಂಗತ ಹೆಚ್. ಗುರು ಅವರ ಮನೆಗೆ ಭೇಟಿ ನೀಡಿ, ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಚೆಕ್ ನ್ನು ವೀರಯೋಧ ಗುರು ತಂದೆಗೆ ಹಾಗೂ ಡಿಸಿಸಿ ಬ್ಯಾಂಕ್ ವತಿಯಿಂದ 5 ಲಕ್ಷ ರೂಪಾಯಿ ಚೆಕ್ ನ್ನು ವೀರ ಯೋಧ ಗುರು ಅವರ ಪತ್ನಿಗೆ ನೀಡಿದರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಧನ್, ಮಾಜಿ ಸಚಿವ ಚೆಲುವರಾಯ ಸ್ವಾಮಿ, ಎಂ.ಎಸ್ ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತ್ಯನ್ ಪುತ್ತೂರ್ ಅವರು ಉಪಸ್ಥಿತರಿದ್ದರು.