Latest

ಕಂಗನಾಗೆ ಮುಂಬೈ ಪೊಲೀಸರಿಂದ ನೋಟೀಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಜನವರಿ 22ರಂದು ಜುಹು ಪೊಲೀಸರ ಮುಂದೆ ವಿಚಾರಣಗೆ ಹಾಜರಾಗುವಂತೆ ಸೂಚಿಸಲಾಗಿದೆ.

Home add -Advt

Related Articles

Back to top button