Kannada NewsKarnataka NewsLatest

ರಾಮಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ಸಮರ್ಪಿಸಿದ ಲಕ್ಷ್ಮಿ ಹೆಬ್ಬಾಳಕರ್

ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಚೆಕ್ ಹಸ್ತಾಂತರ

ಪ್ಬೆರಗತಿವಾಹಿನಿ ಸುದ್ಳದಿ,ಗಾವಿ  – ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 2 ಲಕ್ಷ ರೂ. ನಿಧಿ ಸಮರ್ಪಿಸಿದ್ದಾರೆ.
ಮಂಗಳವಾರ ನಿಧಿ ಸಂಗ್ರಹಕ್ಕೆ ಬಂದ ವಿಶ್ವಹಿಂದೂ ಪರಿಷತ್ ಪ್ರಮುಖರಿಗೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ ಚನ್ನರಾಜ ಹಟ್ಟಿಹೊಳಿ 2 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾ ಪ್ರಮುಖ ವಿಶಾಲ ಖಂಡಾಗಳೆ​, ನಗರ ಸಹಸೇವಾ ಪ್ರಮುಖ ದಿನೇಶ್ ಪಾಟೀಲ, ನಗರ ಸಂಪರ್ಕ ಪ್ರಮುಖ ಗುರುದತ್ತ ಕುಲಕರ್ಣಿ, ನಗರ ಕಾರ್ಯವಾಹ ವಿನೋದ ಶಾನಭಾಗ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಡಿವೇಶ ಇಟಗಿ ಮೊದಲಾದವರಿದ್ದರು.

Related Articles

Back to top button