Kannada NewsLatest

ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಸೂಚನೆ

ದಂಡ ವಸೂಲಿ ಜತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ತಪ್ಪು ಮಾಹಿತಿ ನೀಡಿ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದನ್ನು ಸ್ವಯಂ ಪ್ರೇರಣೆಯಿಂದ ಆಹಾರ ಇಲಾಖೆಗೆ ವಾಪಸ್ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ ಕತ್ತಿ ಅವರು ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ಮತ್ತು ಕಾರ್ಖಾನೆಯ ನೌಕರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಆಧ್ಯತಾ(ಬಿ.ಪಿ.ಎಲ್) ಚೀಟಿಯನ್ನು ಪಡೆದಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಿಂದಿರುಗಿಸುವಂತೆ ಹೇಳಿದ್ದಾರೆ.

ತಪ್ಪು ಮಾಹಿತಿಯನ್ನು ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಫೆ. 20ರೊಳಗಾಗಿ ಸಂಬಂಧಪಟ್ಟ ಆಹಾರ ಇಲಾಖೆಯ ಕಾರ್ಯಾಲಯಕ್ಕೆ ಅಧ್ಯರ್ಪಿಸಿದ್ದರೆ ಯಾವುದೇ ರೀತಿಯ ಕ್ರಮವನ್ನು ವಹಿಸಲಾಗುವುದಿಲ್ಲ. ತದನಂತರ ಎಚ್.ಆರ್.ಎಮ್.ಎಸ್ ತಂತ್ರಾಂಶದಿಂದ ಮಾಹಿತಿ ಪಡೆದು ಶೋಧ ನಡೆಸಿ ಪತ್ತೆ ಹಚ್ಚಿದ್ದಲ್ಲಿ ಅಂತಹ ನೌಕರರ ಮೇಲೆ Illigal Possession of Unauthorized Ration card Act- 1977 ರಡಿ ಕಾನೂನು ಪ್ರಕಾರ ಕ್ರಮ ವಹಿಸಿ ಪಡಿತರ ಚೀಟಿ ಪಡೆದ ದಿನಾಂಕದಿಂದ ಇಲ್ಲಿಯವರೆಗೆ ದಂಡವನ್ನು ವಸೂಲಿ ಮಾಡಲಾಗುವುದು ಹಾಗೂ ಅಂತಹ ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button