Latest

ಕೊರೊನಾ ಸೋಂಕಿಗೆ ಮತ್ತೋರ್ವ ಬಿಜೆಪಿ ಸಂಸದ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಬಿಜೆಪಿ ಸಂಸದ ನಂದ ಕುಮಾರ್ ಸಿಂಗ್ ಚೌಹಾಣ್ ವಿಧಿವಶರಾಗಿದ್ದಾರೆ.

ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ನಂದ ಕುಮಾರ್ ಕೊನೆಯುಸಿರೆಳೆದಿದ್ದಾರೆ. ನಂದ ಕುಮಾರ್ ಮಧ್ಯಪ್ರದೇಶದ ಖಂಡ್ವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಕೋವಿಡ್ ನಿಂದ ಬಳಲುತ್ತಿದ್ದ ನಂದ ಕುಮಾರ್ ಹಲವುದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್, ನಂದ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button