Latest

ನೈಟ್ ಕರ್ಫ್ಯೂ: ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ಇದುವರೆಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಕ್ರಮಗಳು ಜಾರಿಯಲ್ಲಿವೆ ಎಂದರು.

ಇನ್ನು ಸಿಡಿ ಪ್ರಕರಣದ ಯುವತಿ ರಕ್ಷಣೆ ಕೋರಿದ್ದು ತಮ್ಮ ಗಮನಕ್ಕೆ ಬಂದಿದೆ. ಅದನ್ನು SIT ನೋಡಿಕೊಳ್ಳುತ್ತದೆ. ರಕ್ಷಣೆ ಕೋರಿದ ಕುಟುಂಬಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಸಿಎಂ ಬಿ ಎಸ್ ಯಡಿಯೂರಪ್ಪ ನಾಳೆ ಮುಂಜಾನೆ ಎಲ್ಲ ಸಚಿವರ ಸಭೆ ಕರೆದಿದ್ದಾರೆ. ಅಲ್ಲಿ ಯಾವ ವಿಷಯ ಚರ್ಚೆ ಆಗುತ್ತೋ ನೋಡೋಣ ಎಂದು ತಿಳಿಸಿದರು.

ಕಾಲೇಜುಗಳಿಗೆ ರಜೆ ಘೋಷಣೆ; ನಕಲಿ ಸುತ್ತೋಲೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button