Latest

ಸಿಡಿ ಪ್ರಕರಣ: ಎಸ್ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಕೇಸ್ ನಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ರದ್ದು ಕೋರಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ವಕೀಲೆ ಗೀತಾ ಮಿಶ್ರಾ ಎಂಬುವವರು ಎಸ್ ಐಟಿ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರಿ ಗೆಜೆಟ್ ಆದೇಶವಿಲ್ಲದೇ ಎಸ್ಐಟಿ ರಚನೆ ಮಾಡಿರುವುದು ಅನಧಿಕೃತವಾಗಿದೆ. ಹೀಗಾಗಿ ಎಸ್ಐಟಿ ರಚನೆ ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ ಪ್ರಕರಣದ ಕುರಿತು ದೂರು ದಾಖಲಾಗಿರುವ ಕಬ್ಬನ್ ಪಾರ್ಕ್ ಠಾಣೆ ಹಾಗೂ ಸದಾಶಿವನಗರ ಪೊಲೀಸರೇ ತನಿಖೆ ನಡೆಸಬೇಕು. ಈ ಬಗ್ಗೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಪಿಐ ಎಲ್ ಅರ್ಜಿ ಸಲ್ಲಿಸಲಾಗಿದೆ.

ಬೆಳಗಾವಿ ಘಟನೆಯೂ ಕೋರ್ಟ್ ಸಾಕ್ಷಿಯಾಗಲಿದೆ – ವಕೀಲ ಜಗದೀಶ್

Home add -Advt

Related Articles

Back to top button