Kannada NewsKarnataka NewsLatest
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಿತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಉಮೇಶ ಕತ್ತಿ ಸಮ್ಮುಖದಲ್ಲಿ ಬೆಳಗಾವಿಯಲ್ಲಿ ಇಂದು ಮಾರಿಹಾಳ ಬಿಜೆಪಿಗೆ ಮರುಸೇರ್ಪಡೆಯಾದರು.
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
ಬಿಜೆಪಿಯಿಂದ ಮಹಾಂತೇಶ ದೊಡ್ಡಗೌಡರ್ ಸ್ಪರ್ಧಿಸಿ ಗೆದ್ದಿದ್ದರು.
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಉಪ ಚುನಾವಣೆ: ಹೊಸಕೇರಿ ಚೆಕ್ ಪೋಸ್ಟ್ ನಲ್ಲಿ 6 ಲಕ್ಷ ನಗದು ವಶ




