Kannada NewsLatest

ಸತೀಶ್ ಜಾರಕಿಹೊಳಿಯಂತಹ ಸಮರ್ಥ ವ್ಯಕ್ತಿಯನ್ನು ಆರಿಸಿಕಳಿಸೋಣ – ಲಕ್ಷ್ಮಿ ಹೆಬ್ಬಾಳಕರ್ ಮನವಿ​

ಪ್ರಗತಿವಾಹಿನಿ ಸುದ್ದಿ, ​ಬೆಳಗಾವಿ – ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ಕೊಟ್ಟು ಕ್ಷೇತ್ರದ ಅಭಿವೃದ್ಧಿಗೆ ​ಅವಕಾಶ ಮಾಡಿಕೊಟ್ಟಿರುವಂತೆ ಈ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಮತ ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕೆಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕೋರಿದ್ದಾರೆ.
ಬೆಳಗಾವಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥವಾಗಿ ಶುಕ್ರವಾರ ತುಮ್ಮರಗುದ್ದಿ ಗ್ರಾಮದಲ್ಲಿ  ಮತಯಾಚಿಸಿದ ಅವರು,  ಬೆಳಗಾವಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯೇ ಕಾಂಗ್ರೆಸ್ ಪಕ್ಷದ ಮೂಲ ಗುರಿ ಎಂದರು. ನಾನು ಕಳೆದ ಚುನಾವಣೆಯಲ್ಲಿ ಆಯ್ಕೆಯಾದ ನಂತರ ಜನರು ಇಟ್ಟಿರುವ ವಿಶ್ವಾಸಕ್ಕೆ ಸ್ವಲ್ಪವೂ ದಕ್ಕೆಯಾಗದಂತೆ ಕೆಲಸ ಮಾಡುತ್ತಿದ್ದೇನೆ. ಅದೇ ರೀತಿ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಯಾಗಬೇಕಾದರೆ ಸತೀಶ್ ಜಾರಕಿಹೊಳಿ ಅವರಂತಹ ಸಮರ್ಥ ವ್ಯಕ್ತಿಯನ್ನು ಆರಿಸಿಕಳಿಸಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಹೆಬ್ಬಾಳಕರ್ ಹೇಳಿದರು.
​ಎಲ್ಲೆಡೆ  ​​ಪ್ರಚಾರದ ಸಮಯದಲ್ಲಿ ​ಜನರು ಸತೀ​ಶ್​ ಜಾರಕಿಹೊಳಿ ಅವರ​ ಬಗ್ಗೆ ಅಪಾರ ಪ್ರೀತಿ, ಪ್ರೋತ್ಸಾಹವನ್ನು ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ, ​ಅವರು ಲಕ್ಷಾಂತರ ಮತಗಳಿಂದ ಗೆಲ್ಲುವುದರಲ್ಲಿ ಯಾ​ವುದೇ​ ಸಂಶಯವಿಲ್ಲ.​ ಕಾಂಗ್ರೆಸ್ ಪಕ್ಷ ಬಡವರ, ಶ್ರಮಿಕರ ಹಾಗೂ ರೈತರ ಪಕ್ಷವಾಗಿದ್ದು, ಅಭಿವೃದ್ಧಿಯ ಕಾರ್ಯಗಳ ಮುಖೇನ ಜನರ ಬದುಕಿನಲ್ಲಿ ​ಹಾಸುಹೊಕ್ಕಾಗಿದೆ. ಇಂತಹ ಪಕ್ಷಕ್ಕೆ ನಾವೆಲ್ಲರೂ ಬೆಂಬಲ ನೀಡುವ ಮೂಲಕ ಸತೀ​ಶ್ ಜಾರಕಿಹೊಳಿ ಅವರನ್ನು​ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​ ಎಂದು ವಿನಂತಿಸಿದರು.
​ 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button