ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1-9ನೇ ತರಗತಿವರೆಗೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು. ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದರು.
1-5ನೇ ತರಗತಿವರೆಗೆ ಹಾಗೂ 6-9ನೇ ತರಗತಿವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಹೇಳಿದರು.
ಇದು ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನವೇ…?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ