Latest

ಶಾಸಕರಾಗಬೇಕೆ? ಅರ್ಜಿ ಸಲ್ಲಿಸಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನ ಪರಿಷತ್ ಸದಸ್ಯರಾಗಬಯಸಿದ್ದೀರಾ? ಕೂಡಲೇ ಅರ್ಜಿ ಸಲ್ಲಿಸಿ.

2022ರ ಜೂನ್ ತಿಂಗಳಿನಲ್ಲಿ ನಡೆಯಲಿರುವ ವಿಧಾನಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರ ಮತ್ತು ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಆಕಾಂಕ್ಷಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದೆ.

ವಾಯವ್ಯ ಕ್ಷೇತ್ರ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು,  ಆಕಾಂಕ್ಷಿಗಳು ತಮ್ಮ ಪರಿಚಯ ಪತ್ರ, ಫೋಟೋ ಸಹಿತ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಅವರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.

ಜುಲೈ 2022ರಲ್ಲಿ ಈ ಎರಡು ಸ್ಥಾನಗಳಿಗೆ ಹಾಲಿ ಇರುವ ಸದಸ್ಯರು ನಿವೃತ್ತರಾಗಲಿದ್ದಾರೆ. 2022ರ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

Home add -Advt

ಆಸಕ್ತರು ಇದೇ ಮೇ 12ರೊಳಗೆ ಅರ್ಜಿ ಸಲ್ಲಿಸುವಂತೆ ವಿನಯ ನಾವಲಗಟ್ಟಿ ಕೋರಿದ್ದಾರೆ.

Related Articles

Back to top button