Latest

ಮತ್ತೊಂದು ಕಲ್ಲು ಕ್ವಾರಿ ಸ್ಫೋಟ; 10 ಕಾರ್ಮಿಕರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.

ಕಡಪಾ ಜಿಲ್ಲೆಯ ಮಾಮಿಲ್ಲಪಲ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕ್ವಾರಿಯಲ್ಲಿ ಕಲ್ಲು ಒಡೆಯಲೆಂಡು ಸ್ಫೋಟಕ ಅಳವಡಿಸುತ್ತಿದ್ದಾಗ ಏಕಾಏಕಿ ಸ್ಫೋಟಕ ಸಿಡಿದು ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದರೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರ ಪ್ರಕಾರ ಕ್ವಾರಿಗೆ ಸ್ಫೊಟಕಗಳನ್ನು ಸಾಗಿಸುವಾಗಿ ಈ ದುರಂತ ಸಂಭವಿಸಿದೆ ಎಂದಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ತವರು ಜಿಲ್ಲೆಯಲ್ಲಿಯೇ ಈ ದುರಂತ ಸಂಭವಿಸಿದ್ದು, ಘಟನೆ ಕುರಿತಾಗಿ ಸಿಎಂ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಸೋಂಕಿತರಿಗೆ ಐ.ಸಿ.ಯು ಬೆಡ್ ನೀಡಲು ಮುಂದಾದ ಟೆಕ್ಸಾಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button