Kannada NewsLatest

ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಸಾವು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಗೋಕಾಕ್ ತಾಲೂಕಿನ ಲೊಳಸರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನೆ ಮುಂದೆ ಇದ್ದ ಚಂಡಿಗೆ ಸಾದಿಕಾ ಸದ್ದಾಂ ಎಂಬ ಒಂದು ವರ್ಷದ ಮಗು ಬಿದ್ದು ಸಾವನ್ನಪ್ಪಿದೆ.

ಚರಂಡಿ ನೀರು ಮನೆ ಮುಂದೆ ಕಟ್ಟಿಕೊಂಡಿದ್ದರೂ ಈ ಬಗ್ಗೆ ಮನೆಯವರಾಗಲಿ, ಸಂಬಂಧಪಟ್ಟವರಾಗಲಿ ಗಮನಹರಿಸಿಲ್ಲ. ಆಟವಾಡಲು ಹೋದ ಮಗು ಆಯತಪ್ಪಿ ಬಿದ್ದು ಈಗ ಚರಂಡಿಪಾಲಾಗಿದೆ.
ಬೆಳಗಾವಿ ಕೋವಿಡ್ ಪರಿಸ್ಥಿತಿ ಬಿಚ್ಚಿಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button