Latest

ಹೈಕಮಾಂಡ್ ಶಾಸಕರ ಅಭಿಪ್ರಾಯ ಕೇಳಲು ಅವಕಾಶವಿದೆ ಎಂದ ಶಾಸಕ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದ್ದರೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆರೋಗ್ಯವಾಗಿದ್ದವರಿಗೆ ವಯಸ್ಸು ಲೆಕ್ಕಕ್ಕೆ ಬರುವುದಿಲ್ಲ ಎಂದು ಶಾಸಕ, ಸರ್ಕಾರದ ಭರವಸೆಗಳ ಸಮಿತಿ ಅಧ್ಯಕ್ಷ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ಪ್ರವಾಸ ನಡೆಸಿದ್ದಾರೆ. ಪ್ರವಾಹ, ಬರ, ಕೋವಿಡ್ ಮೊದಲ ಅಲೆ, ಎರಡನೇ ಅಲೆ, ಜನರ ಸಂಕಷ್ಟಕ್ಕೆ ಸ್ಪಂದನೆ, ಪ್ರತಿಯೊಂದು ಕೆಲಸವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಎಂ ಬದಲಾವಣೆ ಅಗತ್ಯವೇ ಇಲ್ಲ ಎಂದರು.

ಯಡಿಯೂರಪ್ಪ ಪರ-ವಿರೋಧ ಸಹಿ ಸಂಗ್ರಹ ಮಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಸಹಿಸಂಗ್ರಹ ಮಾಡಲಾಗದು ಎಂದರು. ಶಾಸಕರನ್ನು ಕರೆದು ಹೈಕಮಾಂಡ್ ಅಭಿಪ್ರಾಯ ಕೇಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ವರಿಷ್ಠರು ಕ್ರಮ ಕೈಗೊಳ್ಳಬಹುದು. ಆದರೆ ಯಾರ್ಯಾರೋ ಶಾಸಕರ ಸಹಿ ಸಂಗ್ರಹ ಮಾಡಲಾಗದು. ಹಾಗೇ ಮಾಡಿದರೂ ನಾನು ಯಾವುದೇ ಸಹಿ ಹಾಕಲ್ಲ ಎಂದು ತಿಳಿಸಿದರು.
ಅನ್ ಲಾಕ್ ಪ್ರಕ್ರಿಯೆಗೆ ಸಿದ್ಧತೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button