Latest

ಮುರಗೋಡಲ್ಲಿ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ

Home add -Advt

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ಶ್ರೀ ಮಹಾಂತ ಶಿವಯೋಗಿಗಳ 47ನೇ ವಾರ್ಷಿಕ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ “ತ್ರಿಶುಂಗಪುರ ಉತ್ಸವ-2019” ನಡೆಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಮಹಿಳಾಗೋಷ್ಠಿ ಉದ್ಧೇಶಿಸಿ  ಮಾತನಾಡುತ್ತ, ಈ ದೇಶದ ಸಂಸ್ಕ್ರತಿಯನ್ನು ಬೆಳೆಸಲು ಮಹಿಳೆಯರ ಕೊಡುಗೆ ಅಪಾರವಾದದ್ದು. ಮಹಿಳೆಯ ತ್ಯಾಗ, ಸಹನೆ, ಮಮತೆ, ಪ್ರೀತಿ ವಾತ್ಸಲ್ಯದಿಂದಲೇ ದೇಶ ನಿಂತಿದೆ. ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಹಲವಾರು ಮಠಾಧೀಶರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

Related Articles

Back to top button