Latest

ಲಾಕ್ ಡೌನ್ ಇರುವ ಜಿಲ್ಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕೆಲಸ: ಶಿಕ್ಷಣ ಇಲಾಖೆ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಲಾಕ್ ಡೌನ್ ಇರುವ ಜಿಲ್ಲೆಗಳ ಶಿಕ್ಷಕರು ಜೂನ್ 15ರಿಂದ ಮನೆಯಿಂದಲೇ ಕೆಲಸ ನಿರ್ವಹಿಸಬೇಕು. ಇತರ ಜಿಲ್ಲೆಗಳ ಶಿಕ್ಷಕರು ನಾಳೆಯಿಂದಲೇ ಶಾಲೆಗಳಿಗೆ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜೂನ್ 15ರಿಂದ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಮತ್ತು ಶಿಕ್ಷಕರು ಶಾಲೆಗೆ ಹಾಜರಾಗಲು ಆದೇಶ ನೀಡಲಾಗಿತ್ತು. ಆದರೆ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿದಿರುವುದರಿಂದ ಶಿಕ್ಷಕರಲ್ಲಿ ಗೊಂದಲವಾಗಿತ್ತು.  ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಮತ್ತು ಕೊರೆನಾ ನಿಯಂತ್ರಣಕ್ಕೆ ಬಾರದಿರುವುದರಿಂದ ಶಾಲೆಗೆ ಹೋಗುವುದು ಸಮಸ್ಯೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ. ನಾಳೆಯಿಂದ ಇತರ ಜಿಲ್ಲೆಗಳ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಬೇಕು. 11 ಜಿಲ್ಲೆಗಳ ಶಿಕ್ಷಕರು ಮನೆಯಿಂದಲೇ ಪೂರ್ವತಯಾರಿ ಮಾಡಬೇಕು ಎಂದು ಸೂಚಿಸಲಾಗಿದೆ.

ಆದೇಶದ ಪ್ರತಿಗೆ ಇಲ್ಲಿ ಕ್ಲಿಕ್ ಮಾಡಿ – REVISED Order KSPSTA 14 06 2021

Home add -Advt

 

 

Related Articles

Back to top button