Latest

ಮುಂಬೈಯಲ್ಲೇ ತೀರ್ಮಾನ, ಮುಂಬೈಯಲ್ಲೇ ಮಾತು ಎಂದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ತೆರಳಿ ಡಾ.ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ರಮೇಶ್ ಜಾರಕಿಹೊಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಬಗ್ಗೆ ಈಗಲ್ಲ, ಮುಂಬೈಗೆ ಹೋಗಿ ಮಾತನಾಡುತ್ತೇನೆ ಎಂದರು.

ನಾನು ರಾಜಕೀಯದ ಬಗ್ಗೆ ತೀರ್ಮಾನ ಮಾಡಲು ಮಠಕ್ಕೆ ಬಂದಿಲ್ಲ, ಸುತ್ತೂರು ಶ್ರೀಗಳ ತಾಯಿಯವರ ಸಾವಿನ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿದ್ದೇನೆ. ಸರ್ಕಾರ ತಂದವನು ನಾನು ಸಚಿವ ಸ್ಥಾನ ಕೇಳ್ತೀನಾ? ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ರಮೇಶ್ ಜಾರಕಿಹೊಳಿ ನಡೆ ಕುತೂಹಲಕ್ಕೆ ಕಾರಣವಾಗಿದೆ.

ರಮೇಶ್ ಜಾರಕಿಹೊಳಿ ನಿರ್ಧಾರದ ಬಗ್ಗೆ ಏನೂ ಹೇಳಲ್ಲ ಎಂದ ವಿಶ್ವನಾಥ್

Home add -Advt

Related Articles

Back to top button