
ಪ್ರಗತಿವಾಹಿನಿ ಸುದ್ದಿ, ಖಾನಾಪುರ
ಖಾನಾಪುರದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಪೊಲೀಸ್ ಠಾಣೆ ಯಿಂದ ತಾಲೂಕು ಪಂಚಾಯತ್ ಕಚೇರಿವರೆಗೆ ಸಸಿ ನೆಡಲಾಯಿತು. ನಂತರ ತಾಲೂಕು ಪಂಚಾಯಿತಿ ಸಭಾಗೃಹದಲ್ಲಿ ನೀರಿನ ಮಹತ್ವದ ಬಗ್ಗೆ ವಿಶೇಷ ಕಾರ್ಯಾಗಾರ ನಡೆಯಿತು.

