ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ನೂತನ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಜೊತೆಗೆ, ಮತ್ತೊಮ್ಮೆ ಸಚಿವ ಸ್ಥಾನ ನೀಡಿ ಜನಸೇವೆ ಮಾಡಲು ತಮಗೆ ಅವಕಾಶ ಕಲ್ಪಿಸಿರುವುದಕ್ಕೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ  ಭೇಟಿಯಾಗಿ ಆಶೀರ್ವಾದ ಪಡೆದರು.

ಈಚೆಗೆ ನವದೆಹಲಿಯಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡ ಕಿರಣ ರಿಜಿಜು ಅವರನ್ನು ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭೇಟಿಯಾಗಿ, ಅಭಿನಂದನೆ ಸಲ್ಲಿಸಿದರು.

ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಸ್ಥಾನ; ಗಟ್ಟಿತನ ಸಾಬೀತುಪಡಿಸಿದ ಜೊಲ್ಲೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button