Kannada NewsKarnataka NewsLatest

ಬೆಳಗಾವಿ, ವಿಜಯಪುರಕ್ಕೆ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಈ ಎರಡೂ ಜಿಲ್ಲೆಗಳಿಗೆ ಬೊಮ್ಮಾಯಿ ಅವರ ಮೊದಲ ಭೇಟಿ ಇದಾಗಲಿದೆ.

ವಿಮಾನದ ಮೂಲಕ ಬಳ್ಳಾರಿಗೆ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11 ಗಂಟೆಗೆ ಆಲಮಟ್ಟಿಗೆ ಆಗಮಿಸಿ  ಬಾಗಿನ ಅರ್ಪಿಸುವರು.

1 ಗಂಟೆಗೆ ಆಲಮಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್ ಗೆ ಆಗಮಿಸುವರು. ಸುವರ್ಣ ವಿಧಾನಸೌಧದಲ್ಲಿ 2.30ರಿಂದ ಜನಪ್ರತಿನಿಧಿಗಳೊಂದಿಗೆ ಪ್ರವಾಹ ಮತ್ತು ಕೊರೋನಾ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ.

Home add -Advt

ರಾತ್ರಿ 7.20ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಗೃಹ ಮಂತ್ರಿ ಅರಗಜ್ಞಾನೇಂದ್ರಗೆ ಪೊಲೀಸರ ಕಾಟ!

 

Related Articles

Back to top button