Latest
ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಒಂದೇ ಮನೆಯಲ್ಲಿ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ.
ಮಕ್ಕಿ ಮನೆ ಗ್ರಾಮದಲ್ಲಿ ಮನೆಯಲ್ಲಿಯೇ ಅಜ್ಜಿ, ಮಗಳು, ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೀಣಾ (70), ಶಾರದಾ (49), ಶ್ರಾವ್ಯಾ(16) ಮೃತ ದುರ್ದೈವಿಗಳು.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಬಿಕಿನಿಯಲ್ಲೇ ಏರ್ ಪೋರ್ಟ್ ಗೆ ಬಂದ ಮಹಿಳೆ ; ಶಾಕ್ ಆದ ಜನರು




