Kannada NewsKarnataka NewsLatest

ಪ್ರಸಕ್ತ ಅಧಿವೇಶನ ಬಳಿಕ ಬೆಳಗಾವಿ ಪ್ರವಾಹ ಸಂತ್ರಸ್ತರಿಗೆ ಸೂರು – ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರಸಕ್ತ ಅಧಿವೇಶನದ ಬಳಿಕ ಬೆಳಗಾವಿಯ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2 ವರ್ಷದ ಪ್ರವಾಹಕ್ಕೆ ಪರಿಹಾರ ಕೊಡಬೇಕಿದೆ. ಅದರಲ್ಲೂ ವಿಶೇಷವಾಗಿ ಮನೆಗಳನ್ನು ನಿರ್ಮಿಸಿಕೊಡಬೇಕಿದೆ. ಈ ಬಗ್ಗೆ ಈಗಾಗಲೆ ಜಿಲ್ಲಾಡಳಿತಕ್ಕೆ ಮಾರ್ಗದರ್ಶನ ನೀಡಿದ್ದೇನೆ. ಅಧಿವೇಶನದ ಬಳಿಕ ಹಣಕಾಸು ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಬೆಳಗಾವಿಗೆ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ

Home add -Advt

Related Articles

Back to top button