ಪ್ರಗತಿವಾಹಿನಿ ಸುದ್ದಿ, ಖಾನಾಪುರ:
ಪಟ್ಟಣದ ವಿದ್ಯುತ್ ಸ್ಟೇಶನ್ ನಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಿರುವ ಕಾರಣ ಶುಕ್ರವಾರ ಏ.5ರಂದು ಇಡೀ ದಿನ ತಾಲ್ಲೂಕಿನ ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂನ ಪ್ರಕಟಣೆ ತಿಳಿಸಿದೆ.