Kannada NewsKarnataka NewsLatest

ನ. 25ರ ವರಗೆ ಭಾರಿ ಮಳೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ದಿನಾಂಕ:20.11.2021 ರಿಂದ 25.11.2021ರವರೆಗೆ ಭಾರಿ ಅತಿವೃಷ್ಟಿಯಾಗುವುದಾಗಿ ಬೆಂಗಳೂರಿನ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶದಿಂದ ಮುನ್ಸೂಚನೆಯು ಸ್ವೀಕೃತವಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿದ್ದು,  ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳೊಂದಿಗೆ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು ಎಂದು ಸೂಚಿಸಿದ್ದಾರೆ.
ಜನ ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಎಲ್ಲ ಅಗತ್ಯ ರೀತಿಯ ಸಹಕಾರಗಳನ್ನು ನೀಡಲಾಗುವುದು. ಜಿಲ್ಲಾಡಳಿತ/ತಾಲೂಕಾಡಳಿತವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

Related Articles

Back to top button