Kannada NewsKarnataka NewsLatest

ಖಾನಾಪುರ ತಾಲೂಕಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ

ಶಾಸಕಿ ಅಂಜಲಿ ನಿಂಬಾಳಕರ್, ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪ್ರಚಾರ

ಪ್ರಗತಿವಾಹಿನಿ ಸುದ್ದಿ, ನಂದಗಡ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಕಳೆದ 2 ದಿನಗಳಿಂದ ಸ್ಥಳೀಯ ಶಾಸಕಿ ಅಂಜಲಿ ನಿಂಬಾಳಕರ್ ಅವರೊಂದಿಗೆ ಖಾನಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ದಾರೆ.
 
ಬುಧವಾರ ನಂದಗಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳಲಾಯಿತು. ಈ ವೇಳೆ ಶಾಸಕಿ ಅಂಜಲಿ ನಿಂಬಾಳಕರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯುವಕರೂ, ಉತ್ಸಾಹಿಗಳೂ ಆಗಿರುವ ಚನ್ನರಾಜ ಹಟ್ಟಿಹೊಳಿ ಅವರನ್ನು ವಿಧಾನಪರಿಷತ್ ಅಭ್ಯರ್ಥಿಯನ್ನಾಗಿ ಸರ್ವಾನುಮತದಿಂದ ಕಣಕ್ಕಿಳಿಸಿದೆ. ಅವರನ್ನು ಬೆಂಬಲಿಸಿದರೆ ಕ್ಷೇತ್ರಕ್ಕೆ ಇನ್ನಷ್ಟು ಅನುದಾನ ತರಲು ನನ್ನ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.
 
 ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕ್ಷೇತ್ರದ ಎಲ್ಲ ಭಾಗಗಳಲ್ಲಿ ಪಂಚಾಯಿತಿ ಸದಸ್ಯರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ಸಾಧನೆ, ಇತಿಹಾಸ ನೋಡಿ ಮತ ಕೊಡುವ ಭರವಸೆ ನೀಡುತ್ತಿದ್ದಾರೆ​ ಎಂದರು​
​​ ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಅಂಜಲಿ ನಿಂಬಾಳಕರ್ ಶಾಸಕರಾದ ನಂತರ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಮೂಲೆ ಮೂಲೆಗೆ ಮೂಲಭೂತ ಸೌಲಭ್ಯಗಳು ಸಿಗುವಂತೆ ಮಾಡುತ್ತಿದ್ದಾರೆ. ಅವರೊಂದಿಗೆ ಕೈಜೋಡಿಸಿ ಇನ್ನಷ್ಟು ಅಭಿವೃದ್ಧಿ ಯೋಜನೆ ತರಲು ನನ್ನನ್ನು ಬೆಂಬಲಿಸಿ ಎಂದು ಚನ್ನರಾಜ ಮನವಿ ಮಾಡಿದರು.​
​​
​ನಂದಗಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುಖಂಡರಾದ ಮಹಾದೇವ ಕೋಳಿ, ಸಂತೋಷ ಹಂಜಿ, ಗಂಗಣ್ಣ ಕಲ್ಲೂರ, ಕೌಳೆಕರ್, ಗೌರಿ ನಾಡಗೌಡರ, ವೈಷ್ಣವಿ ಪಾಟೀಲ, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button