Kannada NewsLatest

ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ್ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಇಂದು ಭೂ ಹಗರಣ ಕುರಿತು ಕಾಂಗ್ರೆಸ್ ಸದಸ್ಯರು ಸದನದಲ್ಲಿ ಗದ್ದಲ-ಕೋಲಾಹಲ ಆರಂಭಿಸಿದರು. ನಿಲುವಳಿ ಸೂಚನೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

Home add -Advt

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗಳು ಸೂಚಿಸಿದರೂ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆಯಿತು. ಸಭಾಪತಿಗಳ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರಾದ ಎಸ್.ಆರ್.ಪಾಟೀಲ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ 14 ಸದಸ್ಯರನ್ನು ಸದನದಿಂದ 1 ದಿನದ ಮಟ್ಟಿಗೆ ಅಮಾನತುಗೊಳಿಸಿ ಆದೇಶ ಹೊರಡಿಸಿದರು.

Related Articles

Back to top button