Kannada NewsLatest

ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಳ ಆನಗೋಳಕ್ಕೆ ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾನುವಾರ ಪ್ರತಿಷ್ಠಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಳಕ್ಕೆ ಸೋಮವಾರ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಆನಗೋಳಕ್ಕೆ ತೆರಳಲಿದ್ದಾರೆ. ವಿವಾದ ದಿನದಿಂದ ದಿನಕ್ಕೆ ಗಂಭೀರವಾಗುತ್ತ ಸಾಗಿದ್ದು, ಬೆಳಗಾವಿ ಬೂದಿ ಮುಚ್ಚಿದ ಕೆಂಡದಂತಿದೆ.

ಶನಿವಾರ ಬೆಳಗಿನಜಾವ ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ ಮಾಡಿದ್ದರು. ಈ ವೇಳೆ ಪೊಲೀಸ್ ಠಾಣೆಯ ಎದುರು ಜಮಾಯಿಸಿದ್ದ ರಾಯಣ್ಣ ಸೇನಾ ಯುವಕ ಸಂಘದವರು, ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದಿದ್ದರು.

ಭಾನುವಾರ ಹಬ್ಬದ ಸಂಭ್ರಮದಂತಹ ವಾತಾವರಣದಲ್ಲಿ ರಾಯಣ್ಣ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಆನಗೋಳಕ್ಕೆ ಭೇಟಿ ನೀಡಲಿದ್ದಾರೆ.

 

ಕೃಷಿ ಉಡಾನ್ -2.0 ಯೋಜನೆಯಡಿ ಬೆಳಗಾವಿ ವಿಮಾನ ನಿಲ್ದಾಣ ಸೇರಿಸುವ ಭರವಸೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button