Kannada NewsKarnataka NewsLatest

ಈ ಬಾರಿ ಎಂಇಎಸ್ ವಿರುದ್ಧ ನಿರ್ಣಾಯಕ ಕ್ರಮ – ಬಸವರಾಜ ಬೊಮ್ಮಾಯಿ ಘೋಷಣೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಈ ಬಾರಿ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ನಿರ್ಣಾಯಕ ಕ್ರಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

 ಅವರು ಬೆಳಗಾವಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಹಿಂದೆಲ್ಲ ಕಾಟಾಚಾರಕ್ಕೆನ್ನುವಂತೆ ಕೆಲವರನ್ನು ಬಂಧಿಸಿ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ನಾವು ಪ್ರಮುಖರನ್ನೇ ಬಂಧಿಸಿದ್ದೇವೆ. ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಇರಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಬಾರಿ ನಮ್ಮ ಕ್ರಮ ನಿರ್ಣಾಯಕವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಿ ನಿಯಂತ್ರಣ ಮಾಡಿದ್ದೇವೆ. ಹಿಂದೆಲ್ಲ ಇಂತಹ ಕೆಲಸ ಆಗಿರಲಿಲ್ಲ. ಮಹಾರಾಷ್ಟ್ರದ ಗೃಹ ಕಾರ್ಯದರ್ಶಿಯ ಜೊತೆಗೂ ಮಾತನಾಡಿ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಲು ಕೋರಿದ್ದೇವೆ. ಈ ಬಾರಿ ಅತ್ಯಂತ ನಿರ್ಣಾಯಕ ಕ್ರಮದ ಮೂಲಕ ಇದನ್ನು ಮುಂದುವರಿಸಲು ಅವಕಾಶ ಕೊಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button